ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ: ಚುರುಕುಗೊಂಡ ಸಿಬಿಐ ತನಿಖೆ:
ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಅಧಿಕಾರಿಗಳು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಸಿಬಿಐ ಅಧಿಕಾರಿಗಳು ಉಪನಗರ ಠಾಣೆಗೆ ಬಂದಿರಲಿಲ್ಲ. ಇಂದು ಮತ್ತೆ ಠಾಣೆಗೆ ಬಂದ ಅಧಿಕಾರಿಗಳು ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಹಾಗೂ ಶ್ರೀ ಪಾಟೀಲ ಅವರನ್ನು ವಿಚಾರಣೆಗೆ ಕರೆದಿದ್ದಾರೆ. ಈಗಾಗಲೇ ಧಾರವಾಡ ಉಪನಗರ ಠಾಣೆಗೆ ಮತ್ತೆ ಬಂದ ಸಿಬಿಐ ಅಧಿಕಾರಿಗಳು ಹಲವರನ್ನು ಕರೆಯಿಸಿ ವಿಚಾರಣೆ ನಡೆಸಿದ್ದಾರೆ.
ಸಿಬಿಐ ಸೂಚನೆ ಹಿನ್ನೆಲೆಯಲ್ಲಿ ಬಸವರಾಜ ಮುತ್ತಗಿ ಹಾಗೂ ಶ್ರೀ ಪಾಟೀಲ ಉಪನಗರ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಇನ್ನು ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಕೂಡ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ, ವಿನಯ ಕುಲಕರ್ಣಿ ಅವರ ಪಿ ಎ ಆಗಿದ್ದ ಪ್ರಶಾಂತ ಕೇಕರೆ, ಕೂಡಾ ಸಿಬಿಐ ಮುಂದೆ ಹಾಜರಾಗಿದ್ದಾರೆ..
ಮತ್ತೆ ವಿಚಾರಣೆ ಮುಂದೂವರೆಸಿದ ಸಿಬಿಐ ಅಧಿಕಾರಿಗಳು ಇಂದು ಯಾರ್ಯಾರನ್ನ ವಿಚಾರಣೆಗೆ ಕರಿಸಿದ್ದಾರೆ ಗೊತ್ತಾ...?
Reviewed by News10Karnataka Admin
on
December 09, 2020
Rating:

No comments: